TSK

TSK · 2 ಪೂರ್ವಕಾಲವೃತ್ತಾ 14:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋಶುವನು ದಿನತುಂಬಿದ ಮುದುಕನಾದನು.

ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.

ಯೆಹೂದ್ಯರಿಗೆ, “ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರದ ವಿಧಿಗಳನ್ನು ಕೈಕೊಳ್ಳಿರಿ” ಎಂದು ಆಜ್ಞಾಪಿಸಿದನು.

ಯೆಹೂದದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಗಳಿದ್ದವು. ಯೆರೂಸಲೇಮಿನಲ್ಲಿ ಯುದ್ಧವೀರರಾದ ಭಟರೂ ಇದ್ದರು.

¶ ಆಮೇಲೆ ಅಮಚ್ಯನು ಯೆಹೂದ್ಯರನ್ನು ಒಟ್ಟಾಗಿ ಸೇರಿಸಿ ಸಹಸ್ರಾಧಿಪತಿ, ಶತಾಧಿಪತಿಗಳ ಕೈಕೆಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳಲ್ಲಿ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟವರನ್ನು ಲೆಕ್ಕ ಮಾಡಿಸಿದನು. ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.

ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.

ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.

‹ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.›

¶ ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.

ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”