ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತಬೇಕು.
TSK
TSK · 2 ಪೂರ್ವಕಾಲವೃತ್ತಾ 15:11
Treasury of Scripture Knowledge references in ಕನ್ನಡ IRV.
ಸೌಲನು, “ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು” ಎಂದು ಉತ್ತರಕೊಟ್ಟನು.
¶ ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.
ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.
ಕೂಷ್ಯರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ನುಚ್ಚು ನೂರಾಗಿ ಹೋದರು. ಇಸ್ರಾಯೇಲರಿಗೆ ಅಪರಿಮಿತವಾದ ಕೊಳ್ಳೆ ಸಿಕ್ಕಿತು.