ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.
TSK
TSK · 2 ಪೂರ್ವಕಾಲವೃತ್ತಾ 15:4
Treasury of Scripture Knowledge references in ಕನ್ನಡ IRV.
ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.
ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
“ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.
ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.
ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.