ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.
TSK
TSK · 2 ಪೂರ್ವಕಾಲವೃತ್ತಾ 15:6
Treasury of Scripture Knowledge references in ಕನ್ನಡ IRV.
ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.
ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?
‹ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;›
‹ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ”› ಅಂದನು.