¶ ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು.
TSK
TSK · 2 ಪೂರ್ವಕಾಲವೃತ್ತಾ 16:10
Treasury of Scripture Knowledge references in ಕನ್ನಡ IRV.
ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.
ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, “ಕೈಚಾಚಿ ಅವನನ್ನು ಹಿಡಿಯಿರಿ” ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ.
ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.
ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.
ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.
ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.
ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.
ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.
ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.