¶ ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.
TSK
TSK · 2 ಪೂರ್ವಕಾಲವೃತ್ತಾ 16:4
Treasury of Scripture Knowledge references in ಕನ್ನಡ IRV.
ಆ ಪಟ್ಟಣವು ಚೀದೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರು ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತ್ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು.
ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು, ಯುದ್ಧ ರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.
ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.
ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದ ದೇಶದಲ್ಲಿ ಕೋಟೆಗಳನ್ನೂ ಮತ್ತು ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.