¶ ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.
TSK
TSK · 2 ಪೂರ್ವಕಾಲವೃತ್ತಾ 17:3
Treasury of Scripture Knowledge references in ಕನ್ನಡ IRV.
ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು.
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.
ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.
ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು,
ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು.
ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು.
ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.
ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು.
ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.
ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.
ಇವನು ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಅದನ್ನು ಮೀರದೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.
ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.
ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ
ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
‹ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.›
¶ ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.