ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.
TSK
TSK · 2 ಪೂರ್ವಕಾಲವೃತ್ತಾ 18:19
Treasury of Scripture Knowledge references in ಕನ್ನಡ IRV.
ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?” ಎಂದನು.
ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು.
ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
¶ “ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.
ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.