TSK

TSK · 2 ಪೂರ್ವಕಾಲವೃತ್ತಾ 18:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.

ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.

ಯೆಹೋವನು ಸೈತಾನನಿಗೆ, “ನೋಡು, ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ. ಆದರೆ ಅವನ ಮೈಮೇಲೆ ಮಾತ್ರ ಕೈಹಾಕಬೇಡ” ಎಂದು ಅಪ್ಪಣೆಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.

ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!

ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.

ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.