TSK

TSK · 2 ಪೂರ್ವಕಾಲವೃತ್ತಾ 18:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಷ್ಟರಲ್ಲಿ ದಾವೀದನು, “ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು.

ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.

ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.

ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ಮಿಶ್ರವಾಯಿತು.

ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ.

ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.

ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.

“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.

¶ ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.

ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.