ಆದುದರಿಂದ ಅವನು ಪುನಃ ಯೆಹೋವನನ್ನು ಕೇಳಿದನು. ಆತನು, “ನೀನೆದ್ದು ಕೆಯೀಲಕ್ಕೆ ಹೋಗು. ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.
TSK
TSK · 2 ಪೂರ್ವಕಾಲವೃತ್ತಾ 18:4
Treasury of Scripture Knowledge references in ಕನ್ನಡ IRV.
¶ ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.
ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, “ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.
ತಾನು ಕೇಳಿದ ವಾಕ್ಯಗಳ ವಿಷಯವಾಗಿ, ಇಸ್ರಾಯೇಲ್ ದೇವರಾದ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ,
“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.