ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.
TSK
TSK · 2 ಪೂರ್ವಕಾಲವೃತ್ತಾ 19:11
Treasury of Scripture Knowledge references in ಕನ್ನಡ IRV.
ಅಜರ್ಯನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆದನು.
ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವೆಯ ಎಲ್ಲಾ ಕಾರ್ಯಗಳನ್ನೂ ಮತ್ತು ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಜನರು.
¶ ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.
ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು” ಎಂದು ಹೇಳಿದನು.
ಇದಲ್ಲದೆ, ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಲೇವಿಯರಿಂದಲೂ, ಯಾಜಕರಿಂದಲೂ, ಇಸ್ರಾಯೇಲ್ ಗೋತ್ರ ಪ್ರಧಾನರಿಂದಲೂ, ಕೆಲವರನ್ನು ಆರಿಸಿ ಯೆಹೋವನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ, ಕಲಹಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವುದಕ್ಕಾಗಿ ಅವರನ್ನು ಯೆರೂಸಲೇಮಿನಲ್ಲೇ ಇರಿಸಿದನು.
ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವನಿಗೆ ನಿರ್ದೋಷಿಯೂ,
ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.
ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;
ಯೇಸು ಅವನಿಗೆ, ‹“ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.›
ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?
¶ ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.