ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.
TSK
TSK · 2 ಪೂರ್ವಕಾಲವೃತ್ತಾ 19:2
Treasury of Scripture Knowledge references in ಕನ್ನಡ IRV.
‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;
(ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)
ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.
ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.
¶ ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಸ್ಥಿಕೆಯನ್ನು ಮಾಡಿಕೊಂಡನು.
ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.
ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.
ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.
ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.
ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.
ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ?
¶ ‹“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.›
¶ ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,
ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.
ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ.
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.