¶ ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು.
TSK
TSK · 2 ಪೂರ್ವಕಾಲವೃತ್ತಾ 2:12
Treasury of Scripture Knowledge references in ಕನ್ನಡ IRV.
ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.
ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.
ನಿಟ್ಟುಸಿರಿನಿಂದ ನನ್ನಲ್ಲಿ ಎಲುಬು, ತೊಗಲು ಮಾತ್ರ ಉಳಿದಿರುತ್ತವೆ.
ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.
ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.
“ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ;
“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.
¶ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ,