ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.
TSK
TSK · 2 ಪೂರ್ವಕಾಲವೃತ್ತಾ 20:12
Treasury of Scripture Knowledge references in ಕನ್ನಡ IRV.
ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
¶ ಆಗ ಆ ಸ್ತ್ರೀಯು, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು” ಎಂದು ಬೇಡಿಕೊಂಡಳು. ಅದಕ್ಕೆ ಅರಸನು, “ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ” ಎಂದು ಹೇಳಿದನು.
ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು.
ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.
ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.
ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ತಕ್ಕ ಶಿಕ್ಷೆಯನ್ನು ಕೊಡು.
ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.
ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.
ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.
‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’
¶ ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.