TSK

TSK · 2 ಪೂರ್ವಕಾಲವೃತ್ತಾ 20:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.

ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.

ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.

ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.

ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲರ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಸ್ತುತಿಸಿ ಕೀರ್ತಿಸುವುದಕ್ಕೋಸ್ಕರ ಯಾಜಕರು ತಮ್ಮ ದೀಕ್ಷಾವಸ್ತ್ರಗಳಿಂದ ಭೂಷಿತರಾಗಿ ತುತ್ತೂರಿಗಳೊಡನೆಯೂ, ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡರು.

ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.

ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ.

ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.

ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.

ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು.