TSK

TSK · 2 ಪೂರ್ವಕಾಲವೃತ್ತಾ 21:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.

ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,

ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.