ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.
TSK
TSK · 2 ಪೂರ್ವಕಾಲವೃತ್ತಾ 21:20
Treasury of Scripture Knowledge references in ಕನ್ನಡ IRV.
ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.
ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.
ಯೆರೆಮಿಯ 22:28
TSK
ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?