TSK

TSK · 2 ಪೂರ್ವಕಾಲವೃತ್ತಾ 22:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.

ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.

‘ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ’ ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.

ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.

ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.

ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.

ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.

ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.