ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ, ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.
TSK
TSK · 2 ಪೂರ್ವಕಾಲವೃತ್ತಾ 23:13
Treasury of Scripture Knowledge references in ಕನ್ನಡ IRV.
ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.
ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.
ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.
¶ ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು.
ದಾವೀದನೂ ಮಂಜೂಷವನ್ನು ಹೊತ್ತ ಮತ್ತು ವಾದ್ಯನುಡಿಸುವ ಎಲ್ಲಾ ಲೇವಿಯರೂ, ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಿಗಳನ್ನು ಧರಿಸಿಕೊಂಡಿದ್ದನು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು.
ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.
ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.
ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.
ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.