TSK

TSK · 2 ಪೂರ್ವಕಾಲವೃತ್ತಾ 24:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.

ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.

¶ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.

ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.

ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.

ನಿಮ್ಮಲ್ಲಿ ಯಾರು ಈ ಮಾತಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?

ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.

¶ ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.

ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು.

ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,

‹ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ”› ಅಂದನು.

‹ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ.›

¶ ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, ‹“ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.›