ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
TSK
TSK · 2 ಪೂರ್ವಕಾಲವೃತ್ತಾ 24:7
Treasury of Scripture Knowledge references in ಕನ್ನಡ IRV.
¶ ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,
ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.
ಆಗ ಆಕೆಯು, “ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ಈ ದುಷ್ಟ ಹಾಮಾನನೇ” ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು.
ಮತ್ತು ನಾನು ನನ್ನ ಬೆಳ್ಳಿ ಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ನಿನ್ನ ಚಂದವಾದ ಆಭರಣಗಳನ್ನು ನೀನು ತೆಗೆದು ಅವುಗಳಿಂದ ಪುರುಷ ಮೂರ್ತಿಗಳನ್ನು ರೂಪಿಸಿಕೊಂಡು ಅವುಗಳೊಡನೆ ವ್ಯಭಿಚಾರ ಮಾಡಿದೆ.
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.
ಈಗ ಅವಳೊಂದಿಗೆ ವ್ಯಭಿಚಾರ ಮಾಡಿದವರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.
ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.