ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.
TSK
TSK · 2 ಪೂರ್ವಕಾಲವೃತ್ತಾ 25:19
Treasury of Scripture Knowledge references in ಕನ್ನಡ IRV.
ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.
ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.
ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ.
ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.
ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.
‹ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ?›
ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.