ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ.
TSK
TSK · 2 ಪೂರ್ವಕಾಲವೃತ್ತಾ 25:23
Treasury of Scripture Knowledge references in ಕನ್ನಡ IRV.
ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.
ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.
ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.
ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.
ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.
‹ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು”› ಅಂದನು.