TSK

TSK · 2 ಪೂರ್ವಕಾಲವೃತ್ತಾ 26:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು” ಎಂದು ಹೇಳಿದನು.

¶ ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.

ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.

ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.

ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?” ಎಂದು ಉತ್ತರ ಕೊಟ್ಟುಕಳುಹಿಸಿದನು.

ಅರಸನು ದಮಸ್ಕದಿಂದ ಹಿಂತಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು, ಸಮೀಪಕ್ಕೆ ಹೋಗಿ, ಅದರ ಮೇಲೆ ಬಲಿಗಳನ್ನು ಅರ್ಪಿಸಿದನು.

ಅಹಹ! ಎದೋಮ್ಯರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡಕೊಂಡೆ, ಎಂದು ನೀನು ಹೆಮ್ಮೆಪಡುತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕೆಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ” ಎಂದು ಉತ್ತರಕೊಟ್ಟನು.

ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.

ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.

ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.