TSK

TSK · 2 ಪೂರ್ವಕಾಲವೃತ್ತಾ 30:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,

ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.

ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.

ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.

ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು

ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.

¶ “ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ.

‹ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು”› ಅಂದನು.

ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.