TSK

TSK · 2 ಪೂರ್ವಕಾಲವೃತ್ತಾ 30:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.

ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.

ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.

ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.

ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.

ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು.

ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.

ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.

¶ ಪಸ್ಕವೆಂದು ಕರೆಯಲ್ಪಡುವ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಹತ್ತಿರವಾದಾಗ,

ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.