TSK

TSK · 2 ಪೂರ್ವಕಾಲವೃತ್ತಾ 31:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.

“ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.

ಆಯಾ ಉದ್ಯೋಗ ವರ್ಗಗಳಿಗನುಸಾರವಾಗಿ ಅನುದಿನದ ಸೇವೆಗಾಗಿ ಯೆಹೋವನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂರು ವರ್ಷ ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರ ಪಟ್ಟಿಯಲ್ಲಿ ಬರೆಯಲ್ಪಟ್ಟವರಿಗೆ ಮಾತ್ರ ಕೊಡುತ್ತಿರಲಿಲ್ಲ.

ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.

“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.

“ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ?