TSK

TSK · 2 ಪೂರ್ವಕಾಲವೃತ್ತಾ 32:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು.

ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

¶ ಯೆಶಾಯನು, “ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು” ಎಂದು ಅಪ್ಪಣೆಕೊಟ್ಟನು.