ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.
TSK
TSK · 2 ಪೂರ್ವಕಾಲವೃತ್ತಾ 32:25
Treasury of Scripture Knowledge references in ಕನ್ನಡ IRV.
¶ ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.
ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?” ಎಂದು ಉತ್ತರ ಕೊಟ್ಟುಕಳುಹಿಸಿದನು.
ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು” ಎಂದು ಹೇಳಿದನು.
ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.
¶ ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.
ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?
“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.
¶ “‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.
ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.
ಯೇಸು ಇದನ್ನು ನೋಡಿ, ‹“ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ?›
ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.