ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
TSK
TSK · 2 ಪೂರ್ವಕಾಲವೃತ್ತಾ 32:8
Treasury of Scripture Knowledge references in ಕನ್ನಡ IRV.
“ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.
ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.
ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.
ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.
ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.
ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.
ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ
ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.
ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು.
¶ “ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?
ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
¶ ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.