TSK

TSK · 2 ಪೂರ್ವಕಾಲವೃತ್ತಾ 33:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.

ಮನಸ್ಸೆಯ ಸೇವಕರು ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಅರಸನ ಅರಮನೆಯಲ್ಲಿಯೇ ಕೊಂದುಹಾಕಿದರು.

ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.

ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.