¶ “‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.
TSK
TSK · 2 ಪೂರ್ವಕಾಲವೃತ್ತಾ 33:6
Treasury of Scripture Knowledge references in ಕನ್ನಡ IRV.
¶ “‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.
¶ “‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.
ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.
ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.
ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ “ತೋಫೆತ್” ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು.
¶ ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.
¶ “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?
ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ ಮತ್ತು ವಿಧವೆಯ ಸ್ಥಿತಿ ಇವೆರಡೂ ನಿನಗುಂಟಾಗುವವು. ನೀನು ಎಷ್ಟು ಮಾಟಮಾಡಿದರೂ, ಎಷ್ಟೇ ಮಂತ್ರತಂತ್ರಗಳನ್ನು ನಡೆಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.
ಅವರು ವ್ಯಭಿಚಾರ ಮಾಡಿದ್ದಾರೆ, ಅವರ ಕೈ ರಕ್ತಮಯವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರಮಾಡಿದ್ದಾರೆ, ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬದಲಾಗಿ ಆಹುತಿಕೊಟ್ಟಿದ್ದಾರೆ.
ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,