¶ ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು.
TSK
TSK · 2 ಪೂರ್ವಕಾಲವೃತ್ತಾ 34:19
Treasury of Scripture Knowledge references in ಕನ್ನಡ IRV.
¶ ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.
ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.
ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.
¶ ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.
¶ ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.