¶ “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,
TSK
TSK · 2 ಪೂರ್ವಕಾಲವೃತ್ತಾ 34:24
Treasury of Scripture Knowledge references in ಕನ್ನಡ IRV.
¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:
ಇಸ್ರಾಯೇಲಿನ ದೇವರಾದ ಯೆಹೋವನೆಂಬ ನಾನು ಯೆರೂಸಲೇಮಿನವರ ಮೇಲೆಯೂ, ಯೆಹೂದದವರ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವರ ಎರಡು ಕಿವಿಗಳು ಬಿರಿದು ಹೋಗುವವು.
ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.
ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?
ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.
ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.
ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’” ಎಂದು ಹೇಳಿದನು.
¶ “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.