ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು.
TSK
TSK · 2 ಪೂರ್ವಕಾಲವೃತ್ತಾ 34:25
Treasury of Scripture Knowledge references in ಕನ್ನಡ IRV.
ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.
ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.
ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.
¶ ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.
ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬುದು ಸಕಲ ನರಪ್ರಾಣಿಗಳಿಗೂ ಗೋಚರವಾಗುವುದು; ಅದು ಆರಿಹೋಗದು.’
¶ ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.