TSK

TSK · 2 ಪೂರ್ವಕಾಲವೃತ್ತಾ 34:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಮುಖ್ಯ ದಾಖಲೆಮಾಡುವ ಲೇಖಕ.

ಚೆರೂಯಳ ಮಗನಾದ ಯೋವಾಬನು ಅವನ ಸೇನಾಧಿಪತಿಯೂ, ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.

ಯಾಜಕರನ್ನೂ ಲೇವಿಯರನ್ನೂ ಒಟ್ಟಿಗೆ ಸೇರಿಸಿ ಅವರಿಗೆ, “ನೀವು ಯೆಹೂದದ ಪಟ್ಟಣಗಳಿಗೆ ಹೋಗಿ, ನಿಮ್ಮ ದೇವರಾದ ಯೆಹೋವನ ಆಲಯದ ವಾರ್ಷಿಕ ಜೀರ್ಣೋದ್ಧಾರ ಮಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರಿಂದ ಹಣ ಸಂಗ್ರಹಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ” ಎಂದು ಆಜ್ಞಾಪಿಸಿದನು. ಆದರೂ ಲೇವಿಯರು ಅವಸರ ಮಾಡಲಿಲ್ಲ.

ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.

¶ ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.

ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.

ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.

ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ