ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,
TSK
TSK · 2 ಪೂರ್ವಕಾಲವೃತ್ತಾ 36:16
Treasury of Scripture Knowledge references in ಕನ್ನಡ IRV.
¶ ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.
ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.
ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.
ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?
ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;
ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.
ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.
ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;
ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.
¶ ‹“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು›‹ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು›‹ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.›
‹ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,›
ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.
“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.
ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.