¶ “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,
TSK
TSK · 2 ಪೂರ್ವಕಾಲವೃತ್ತಾ 36:17
Treasury of Scripture Knowledge references in ಕನ್ನಡ IRV.
ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.
ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.
ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
¶ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.
ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;
ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು.
ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು.
ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.
ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.
ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.
ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.
ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?
¶ ಮತ್ತೂ ಆತನು ಉಳಿದವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ” ಎಂಬುದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು.
ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗಳಿಂದ ಹತಿಸುವರು.
ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.
¶ ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.