¶ ಯೆಹೋವನು ಎದೋಮ್ಯನೂ, ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧವಾಗಿ ಎಬ್ಬಿಸಿದನು.
TSK
TSK · 2 ಪೂರ್ವಕಾಲವೃತ್ತಾ 36:22
Treasury of Scripture Knowledge references in ಕನ್ನಡ IRV.
ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ದೇವರು ಮಾಡಿದ್ದಾನೆ.
ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.
ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.
¶ ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.
ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು.
ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ.
ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.
¶ ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.
ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.