ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು.
TSK
TSK · 2 ಪೂರ್ವಕಾಲವೃತ್ತಾ 4:6
Treasury of Scripture Knowledge references in ಕನ್ನಡ IRV.
ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.
ಇದಲ್ಲದೆ ಅವನು ನಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.
ಸೊಲೊಮೋನನು ಒಂದು ಕಂಚಿನ ಕಡಲು ಎಂಬ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರವು ಐದು ಮೊಳವಾಗಿಯೂ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
¶ ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.