¶ ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.
TSK
TSK · 2 ಪೂರ್ವಕಾಲವೃತ್ತಾ 5:13
Treasury of Scripture Knowledge references in ಕನ್ನಡ IRV.
¶ ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.
¶ ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.
ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.
ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.
ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.
ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.
ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.
ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.
ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.
ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.
¶ ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.
ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.