ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.
TSK
TSK · 2 ಪೂರ್ವಕಾಲವೃತ್ತಾ 6:26
Treasury of Scripture Knowledge references in ಕನ್ನಡ IRV.
¶ ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,
ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು
ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.
¶ ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:
ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.
¶ ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.
¶ “ಬೇತೇಲಿಗೆ ಹೋಗಿ ದ್ರೋಹ ಮಾಡಿರಿ, ಗಿಲ್ಗಾಲಿನಲ್ಲಿ ಸೇರಿ ದ್ರೋಹವನ್ನು ಇನ್ನೂ ಹೆಚ್ಚಿಸಿರಿ. ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ.
ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.