TSK

TSK · 2 ಪೂರ್ವಕಾಲವೃತ್ತಾ 6:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.

¶ ಆ ನಂತರ ಮೋಶೆಯು ಯೆಹೋವನು ಇಸ್ರಾಯೇಲರ ಪರವಾಗಿ ಫರೋಹನಿಗೂ, ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ, ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ, ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ತನ್ನ ಮಾವನಿಗೆ ವಿವರಿಸಿದನು.

ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.

ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.

¶ ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.

¶ ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, “ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ” ಎಂದು ಹೇಳಿ ಕಳುಹಿಸಿದನು.

ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.

ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.

ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.”

¶ ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,

‹ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.›

¶ ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.

ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.

ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.