TSK

TSK · 2 ಪೂರ್ವಕಾಲವೃತ್ತಾ 9:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.

ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.

ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.

ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.

‹ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.›

ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು

ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.

ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.