TSK

TSK · 2 ಪೂರ್ವಕಾಲವೃತ್ತಾ 9:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.

ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.

ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

ಇಸ್ರಾಯೇಲರು ಸದಾಕಾಲವು ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದ್ದೀ. ಯೆಹೋವನೇ, ನೀನು ಅವರಿಗೆ ದೇವರಾಗಿದ್ದಿ.

¶ ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.

ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.

¶ ತೂರಿನ ಅರಸನಾದ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ತನ್ನ ಒಪ್ಪಿಗೆ ಸೂಚಿಸಿದನು. “ಯೆಹೋವನು ತನ್ನ ಪ್ರಜೆಗಳನ್ನು ಪ್ರೀತಿಸುವವನಾಗಿರುವುದರಿಂದ ನಿನ್ನನ್ನು ಅವರ ಅರಸನನ್ನಾಗಿ ನೇಮಿಸಿದ್ದಾನೆ.”

ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.

ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.

ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.

ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.

ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.

ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.