¶ ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ.
TSK
TSK · 2 ಕೊರಿಂಥದವರಿಗೆ 12:21
Treasury of Scripture Knowledge references in ಕನ್ನಡ IRV.
¶ ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.
¶ ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.
ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.
ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.
ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.
¶ ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
¶ ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ.
ಆದಕಾರಣ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟು ಮಾಡಿಕೊಡಿರಿ.
ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಪ್ರತಿಕಾರವನ್ನು ನೀಡುವುದಕ್ಕೆ ಸಿದ್ಧರಾಗಿದ್ದೇವೆ.
ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ.
ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
¶ ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.
¶ ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, ‹“ಹೌದು ನಾನು ನಿಜವಾಗಿ›‹ಬೇಗನೇ ಬರುತ್ತೇನೆ!”› ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.