ಅತ್ತೆಯು “ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ” ಎನ್ನಲು ರೂತಳು ನಾನು ಹಕ್ಕಲಾಯ್ದ ಹೊಲದ ಯಜಮಾನನ ಹೆಸರು, ಬೋವಜನೆಂದು ತಿಳಿಸಿದಳು.
TSK
TSK · 2 ಕೊರಿಂಥದವರಿಗೆ 9:13
Treasury of Scripture Knowledge references in ಕನ್ನಡ IRV.
‹ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.›
¶ ‹“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ?›
ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.
ಇದಕ್ಕೆ ನಾನೇ ಸಾಕ್ಷಿ. ದೇವಜನರಿಗೆ ಸಹಾಯ ಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗಲು ಅಪ್ಪಣೆಯಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು.
¶ ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.
ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.
ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.