ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
TSK
TSK · 2 ಅರಸುಗಳು 13:23
Treasury of Scripture Knowledge references in ಕನ್ನಡ IRV.
ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು” ಎಂದನು.
ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.
ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.
¶ ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;
ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.
ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು. ಈ ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.
¶ ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.
ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.
ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.
ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.
ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.
ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.
ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.
ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.