ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
TSK
TSK · 2 ಅರಸುಗಳು 13:6
Treasury of Scripture Knowledge references in ಕನ್ನಡ IRV.
ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.
ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು.
ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.
ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.
ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು.